ADVERTISEMENT

ಸಾಮಾನ್ಯ ಸಭೆಗೆ ಕಡ್ಡಾಯ ಹಾಜರಾತಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2019, 9:57 IST
Last Updated 23 ಜೂನ್ 2019, 9:57 IST

ಹೊಸಪೇಟೆ: ‘ಸೋಮವಾರ (ಜೂ.24) ಬೆಳಿಗ್ಗೆ ನಗರದಲ್ಲಿ ನಡೆಯಲಿರುವ ಸಾಮಾನ್ಯ ಸಭೆಗೆ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ. ವೆಂಕೋಬಪ್ಪ ಸೂಚನೆ ನೀಡಿದ್ದಾರೆ.

‘ಕೆಲ ಇಲಾಖೆಯ ಅಧಿಕಾರಿಗಳು ಸಭೆಗೆ ಹಾಜರಾಗುತ್ತಿಲ್ಲ. ಅದಕ್ಕೆ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ನಡೆದ ಸ್ಥಾಯಿ ಸಮಿತಿ ಸಭೆಗೆ ಅನೇಕ ಅಧಿಕಾರಿಗಳು ಹಾಜರಾಗಿರಲಿಲ್ಲ. ಸೋಮವಾರ ನಡೆಯಲಿರುವ ಸಭೆಯಲ್ಲಿ ಎಲ್ಲ ಅಧಿಕಾರಿಗಳು ಭಾಗವಹಿಸದಿದ್ದರೆ ಸಭೆ ಮೊಟಕುಗೊಳಿಸಬೇಕು ಎಂದು ಸದಸ್ಯರು ಒತ್ತಾಯಿಸಿದ್ದಾರೆ. ಹಾಗಾಗಿ ಎಲ್ಲರೂ ಸಭೆಗೆ ಬರಬೇಕು. ಒಂದುವೇಳೆ ಸಭೆಗೆ ಗೈರು ಹಾಜರಾದರೆ ಅದಕ್ಕೆ ಅಂತಹವರನ್ನು ಹೊಣೆಗಾರರಾಗಿ ಮಾಡಿ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲಾಗುವುದು‘ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT