ADVERTISEMENT

ರಸ್ತೆ ಅಪಘಾತದಲ್ಲಿ ಪತ್ರಕರ್ತ ಸಾವು

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2022, 17:02 IST
Last Updated 3 ನವೆಂಬರ್ 2022, 17:02 IST
ಬಸವರಾಜ
ಬಸವರಾಜ   

ಹೊಸಪೇಟೆ (ವಿಜಯನಗರ): ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಪತ್ರಕರ್ತ ಬಸವರಾಜ (38) ಗುರುವಾರ ನಿಧನ ಹೊಂದಿದರು.

ಮೃತರಿಗೆ ಪತ್ನಿ, ಮಗಳು, ಮಗ ಇದ್ದಾರೆ.‘ಬಿ’ ಟಿ.ವಿ. ಬಳ್ಳಾರಿ ಜಿಲ್ಲಾ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದರು. ಬುಧವಾರ ಸ್ನೇಹಿತ ಭಾಸ್ಕರ್‌ ಅವರೊಂದಿಗೆ ತಾಲ್ಲೂಕಿನ ಕಮಲಾಪುರಕ್ಕೆ ಹೋಗುತ್ತಿದ್ದಾಗ ಎಮ್ಮೆ ಅಡ್ಡಬಂದಿದೆ. ನಿಯಂತ್ರಣ ತಪ್ಪಿ ಬಿದ್ದು, ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಬಸವರಾಜ ಅವರಿಗೆ ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಗುರುವಾರ ಅವರು ಮೃತಪಟ್ಟರು. ಶುಕ್ರವಾರ (ನ.4) ಕಮಲಾಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT