ADVERTISEMENT

ಕಂಪ್ಲಿ ಬಂದ್, ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 6:26 IST
Last Updated 30 ನವೆಂಬರ್ 2020, 6:26 IST
ಮೆರವಣಿಗೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದರಿಂದ ಬಿಜೆಪಿ ಮುಖಂಡರು ಕುಪಿತರಾದರು.
ಮೆರವಣಿಗೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದರಿಂದ ಬಿಜೆಪಿ ಮುಖಂಡರು ಕುಪಿತರಾದರು.   

ಕಂಪ್ಲಿ: ವಿಜಯನಗರ ಜಿಲ್ಲೆಗೆ ಕಂಪ್ಲಿ ತಾಲ್ಲೂಕು ಸೇರ್ಪಡೆ ಮಾಡದೆ ಇರುವುದನ್ನು ಖಂಡಿಸಿ ಸೋಮವಾರ ಕಂಪ್ಲಿಯಲ್ಲಿ ಬಂದ್, ಪ್ರತಿಭಟನೆ ಆರಂಭವಾಗಿದೆ‌. ತಾಲ್ಲೂಕು ಹೋರಾಟ ಸಮಿತಿ, ವಿವಿಧ ಪ್ರಗತಿಪರ ಸಂಘಟನೆಗಳು ಭಾಗವಹಿಸಿವೆ.

ಮೆರವಣಿಗೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದರಿಂದ ಬಿಜೆಪಿ ಮುಖಂಡರು ಕುಪಿತರಾದರು.

ಈ ವೇಳೆ ಶಾಸಕ ಜೆ.ಎನ್. ಗಣೇಶ್ ಮತ್ತು ಬಿಜೆಪಿಯವರ ಮಧ್ಯೆ ವಾಗ್ವಾದ ನಡೆಯಿತು. ನಂತರ ಪೋಲಿಸರು ಮಧ್ಯೆ ಪ್ರವೇಶಿಸಿ ವಾತಾವರಣ ತಿಳಿಗೊಂಡಿತು.

ADVERTISEMENT

ಡಾ. ಅಂಬೇಡ್ಕರ್ ವೃತ್ತದಲ್ಲಿ‌ ಬಹಿರಂಗ ಸಭೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.