ಹೊಸಪೇಟೆ: ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಧ್ಯಯನಾಂಗ ಕಟ್ಟಡದಲ್ಲಿ ಬುಧವಾರ ಬೆಳಿಗ್ಗೆ ಗುಮಾಸ್ತ ಹನುಮಂತರಾಯ (48) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
’ಸಿಬ್ಬಂದಿಯೊಬ್ಬರು ಶೌಚಾಲಯಕ್ಕೆ ಹೋಗುವಾಗ ಘಟನೆ ಬೆಳಕಿಗೆ ಬಂದಿದೆ. ಹನುಮಂತರಾಯ ಅವರು ಬೆಳಿಗ್ಗೆ 7ಗಂಟೆಗೆ ವಿಶ್ವವಿದ್ಯಾಲಯಕ್ಕೆ ಬಂದಿರುವುದು ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ದಾಖಲಾಗಿದ್ದು, ಅದರ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲಾಗದೇ ಜೀವ ತ್ಯಜಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರಿಗೆ ಪತ್ನಿ, ಮೂವರು ಹೆಣ್ಣು, ಒಬ್ಬ ಮಗ ಇದ್ದಾನೆ. ಘಟನೆ ನಡೆದ ವಿಷಯ ತಿಳಿದುವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಅಧ್ಯಯನಾಂಗ ಕಟ್ಟಡದ ಎದುರು ಸೇರಿದ್ದರು. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.