
ಹೂವಿನಹಡಗಲಿ: ತಾಲ್ಲೂಕಿನ ಮಾಗಳ ಗ್ರಾಮದ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮುಂಡರಗಿಯ ಅನ್ನದಾನೇಶ್ವರ ಬಿಎಡ್ ಕಾಲೇಜಿನಲ್ಲಿ ಜರುಗಿದ 18ನೇ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಾಗಳ ಪಿಎಂಶ್ರೀ ಸಮಾಹಿಪ್ರಾ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿಯರಾದ ನೀಲಮ್ಮ, ಸೀಮಾ, ರಂಜಿತಾ, ಶಕುಂತಲಾ ಅವರು ಅದ್ಭುತ ಪ್ರದರ್ಶನ ನೀಡಿ, ತಲಾ ಮೂರು ಚಿನ್ನ, ಬೆಳ್ಳಿ, ಕಂಚಿನ ಪದಕಗಳನ್ನು ಜಯಿಸಿ ರಾಷ್ಟ್ರ ಮಟ್ಟ ಪ್ರವೇಶಿಸಿದ್ದಾರೆ.
ಜನವರಿ ಮೊದಲ ವಾರ ಹೈದರಾಬಾದ್ನಲ್ಲಿ ಜರುಗಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಗ್ರಾಮೀಣ ವಿದ್ಯಾರ್ಥಿನಿಯರ ಸಾಧನೆಯನ್ನು ಮುಖ್ಯ ಶಿಕ್ಷಕ ಡಿ.ವಿರೂಪಣ್ಣ, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಕೆ. ಮಮತಾ ಪ್ರಶಂಸಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.