ADVERTISEMENT

ಬಳ್ಳಾರಿ: ಸಂಡೂರುನಲ್ಲಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ನಿರಾಶೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2023, 4:47 IST
Last Updated 27 ಏಪ್ರಿಲ್ 2023, 4:47 IST
   

ಬಳ್ಳಾರಿ: ಸಂಡೂರುನಲ್ಲಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ನಿರಾಶೆ ಉಂಟಾಗಿದೆ.

ಸಂಡೂರು ವಿಜಯ ಸರ್ಕಲ್‌ನಲ್ಲಿ ಸುದೀಪ್‌ಗಾಗಿ ಕಾಯುತ್ತಿದ್ದ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಕಾರಿನಿಂದ ಕೆಳಗಡೆ ಇಳಿಯದ ಕಿಚ್ಚ ಸುದೀಪ್ ಸಂಡೂರುನಿಂದ ಕೂಡ್ಲಿಗಿಗೆ ತೆರಳಿದ್ದಾರೆ.

ಸಂಡೂರಿನ ವಿಜಯ ಸರ್ಕಲ್‌ನಲ್ಲಿ ಸುದೀಪ್ ಪ್ರಚಾರ ಮಾಡುತ್ತಾರೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದರು. ಆದರೆ ಸುದೀಪ್ ತೆರಳಿದ್ದರಿಂದ ಅಭಿಮಾನಿಗಳಿಗೆ ನಿರಾಶೆಯಾಗಿದೆ.

ADVERTISEMENT

ನಿನ್ಮೆ ಸಂಡೂರು ತಾಲೂಕಿನ ದೊಡ್ಡ ಅಂತಾಪುರ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಶಿಲ್ಪಾ ರಾಘವೇಂದ್ರ ಪರ ಸುದೀಪ್ ಪ್ರಚಾರ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.