ADVERTISEMENT

ಸ್ಥಾಯಿ ಸಮಿತಿಗೆ ಕಿಶೋರ್‌ ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2020, 9:58 IST
Last Updated 15 ಡಿಸೆಂಬರ್ 2020, 9:58 IST
ಕಮಲಾಪುರ ಪಟ್ಟಣ ಪಂಚಾಯಿತಿ ಸಾಮಾಜಿಕ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಕಿಶೋರ್‌ ಕುಮಾರ್‌ ಅವರಿಗೆ ಅಧ್ಯಕ್ಷ ಸೈಯದ್‌ ಅಮಾನುಲ್ಲಾ ಹಾಗೂ ಇತರೆ ಸದಸ್ಯರು ಸನ್ಮಾನಿಸಿದರು
ಕಮಲಾಪುರ ಪಟ್ಟಣ ಪಂಚಾಯಿತಿ ಸಾಮಾಜಿಕ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಕಿಶೋರ್‌ ಕುಮಾರ್‌ ಅವರಿಗೆ ಅಧ್ಯಕ್ಷ ಸೈಯದ್‌ ಅಮಾನುಲ್ಲಾ ಹಾಗೂ ಇತರೆ ಸದಸ್ಯರು ಸನ್ಮಾನಿಸಿದರು   

ಹೊಸಪೇಟೆ: ಕಮಲಾಪುರ ಪಟ್ಟಣ ಪಂಚಾಯಿತಿ ಸಾಮಾಜಿಕ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಬಿ. ಕಿಶೋರ್‌ ಕುಮಾರ್‌ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.

ಮಂಗಳವಾರ ನಡೆದ ಸ್ಥಾಯಿ ಸಮಿತಿ ಚುನಾವಣೆಗೆ ಹತ್ತನೇ ವಾರ್ಡಿನ ಕಿಶೋರ್‌ ಕುಮಾರ್‌ ಬಿಟ್ಟರೆ ಬೇರೆ ಯಾರೂ ನಾಮಪತ್ರ ಸಲ್ಲಿಸಲಿಲ್ಲ. ಹೀಗಾಗಿ ಕುಮಾರ್‌ ಅವಿರೋಧ ಆಯ್ಕೆಯಾದರು.

ಮುಖ್ಯಾಧಿಕಾರಿ ನಾಗೇಶ್, ಅಧ್ಯಕ್ಷ ಸೈಯದ್ ಅಮಾನುಲ್ಲಾ ಸದಸ್ಯರಾದ ರಾಜ, ಸರಿತಾ, ಗೌಸಿಯಾ, ಅಜಯ್‍ಕುಮಾರ್, ಮಮತಾ, ಜ್ಯೋತಿ ಬಾಯಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.