ಹೊಸಪೇಟೆ: ಕಮಲಾಪುರ ಪಟ್ಟಣ ಪಂಚಾಯಿತಿ ಸಾಮಾಜಿಕ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಬಿ. ಕಿಶೋರ್ ಕುಮಾರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.
ಮಂಗಳವಾರ ನಡೆದ ಸ್ಥಾಯಿ ಸಮಿತಿ ಚುನಾವಣೆಗೆ ಹತ್ತನೇ ವಾರ್ಡಿನ ಕಿಶೋರ್ ಕುಮಾರ್ ಬಿಟ್ಟರೆ ಬೇರೆ ಯಾರೂ ನಾಮಪತ್ರ ಸಲ್ಲಿಸಲಿಲ್ಲ. ಹೀಗಾಗಿ ಕುಮಾರ್ ಅವಿರೋಧ ಆಯ್ಕೆಯಾದರು.
ಮುಖ್ಯಾಧಿಕಾರಿ ನಾಗೇಶ್, ಅಧ್ಯಕ್ಷ ಸೈಯದ್ ಅಮಾನುಲ್ಲಾ ಸದಸ್ಯರಾದ ರಾಜ, ಸರಿತಾ, ಗೌಸಿಯಾ, ಅಜಯ್ಕುಮಾರ್, ಮಮತಾ, ಜ್ಯೋತಿ ಬಾಯಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.