ಕೊಟ್ಟೂರು: ತೀವ್ರ ಕುತೂಹಲ ಮೂಡಿಸಿದ್ದ ಇಲ್ಲಿನ ತಾಲ್ಲೂಕು ಪಂಚಾಯ್ತಿಅಧ್ಯಕ್ಷರಾಗಿ ರಾಂಪುರ ಕ್ಷೇತ್ರದ ಶಾನಭೋಗರ ಎಸ್.ಗುರುಮೂರ್ತಿ, ಉಪಾಧ್ಯಕ್ಷರಾಗಿ ಕಾಳಾಪುರ ಕ್ಷೇತ್ರದ ಮಮತಾ ಶುಕ್ರವಾರ ಅವಿರೋಧವಾಗಿ ಆಯ್ಕೆ ಯಾದರು. ಈ ಇಬ್ಬರಷ್ಟೇ ನಾಮಪತ್ರ ಸಲ್ಲಿಸಿದ್ದರಿಂದಚುನಾವಣಾಧಿಕಾರಿ ಪ್ರಸನ್ನಕುಮಾರ್.ವಿ.ಕೆ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಒಟ್ಟು ಎಂಟು ಸದಸ್ಯರ ಬಲವಿರುವ ತಾಲ್ಲೂಕು ಪಂಚಾಯ್ತಿಯಲ್ಲಿ ಐವರು ಸದಸ್ಯರು ಹಾಜರಿದ್ದರು, ಮೂವರು ಗೈರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.