ಹರಪನಹಳ್ಳಿ: ಪಟ್ಟಣದ ಗೋಸಾಯಿ ಗುಡ್ಡದ ಸಮೀಪ ಇರುವ ಟಿಎಂಎಇ ಸಂಸ್ಥೆಯ ಕಟ್ಟಿ ಸೇತುರಾಮಾಚಾರ್ ಶಿಕ್ಷಣ ವಿದ್ಯಾಲಯದಲ್ಲಿ(ಬಿ.ಇಡಿ) ಅಂತಿಮ ವರ್ಷದಲ್ಲಿ 80 ದಾಖಲಾತಿ ಇದ್ದು, ಕೇವಲ ಮೂವರು ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದರು.
ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ವಿವಿಧ ವಿಭಾಗಗಳ ಅಂತಿಮ ವರ್ಷದ 15 ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದರು. ಕೋವಿಡ್ ಪರೀಕ್ಷೆ ಮಾಡಿಸದೇ ಬಂದಿದ್ದ ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಲಾಗಿದೆ. ಬುಧವಾರದಿಂದ ಕಾಲೇಜಿನಲ್ಲಿಯೇ ಕೋವಿಡ್ ತಪಾಸಣಾ ಕೇಂದ್ರ ತೆರೆಯಲಾಗುವುದು ಎಂದು ಪ್ರಾಚಾರ್ಯ ಎಸ್. ಷಣ್ಮುಖನಗೌಡ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.