ADVERTISEMENT

ಬಸ್‌ ನಿಲ್ದಾಣದಲ್ಲಿ ಯುವತಿ ಸಾವು

​ಪ್ರಜಾವಾಣಿ ವಾರ್ತೆ
Published 20 ಮೇ 2019, 13:21 IST
Last Updated 20 ಮೇ 2019, 13:21 IST

ಹೊಸಪೇಟೆ: ಮಾನಸಿಕ ಅಸ್ವಸ್ಥ ಯುವತಿ ನಗರದ ಕೇಂದ್ರ ಬಸ್‌ ನಿಲ್ದಾಣದ ಕಟ್ಟಡದ ಮೇಲ್ಭಾಗದಿಂದ ಬಿದ್ದು ಸೋಮವಾರ ಬೆಳಿಗ್ಗೆ ಸಾವನ್ನಪ್ಪಿದ್ದಾಳೆ.

ಕೊಪ್ಪಳ ಜಿಲ್ಲೆ ಕನಕಗಿರಿ ನಿವಾಸಿ ಅಶ್ವಿನಿ (25) ಮೃತ ಯುವತಿ. ‘ಯುವತಿಯ ಪೋಷಕರು ಆಕೆಯನ್ನು ಹುಬ್ಬಳ್ಳಿಯ ಮಾನಸಿಕ ರೋಗ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲು ಕರೆದುಕೊಂಡು ಹೋಗುತ್ತಿದ್ದರು. ಕೊಪ್ಪಳ ಬಸ್‌ ನಿಲ್ದಾಣದಿಂದ ತಪ್ಪಿಸಿಕೊಂಡ ಯುವತಿ ಸೋಮವಾರ ನಗರದ ಬಸ್‌ ನಿಲ್ದಾಣಕ್ಕೆ ಬಂದು ಕಟ್ಟಡ ಏರಿದ್ದಾಳೆ. ಈ ವೇಳೆ ಅಲ್ಲಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ’ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದರು.

ಯುವತಿಯ ಮೃತ ದೇಹ ಕೆಳಗೆ ಬಿದ್ದಿರುವುದನ್ನು ನೋಡಿ ನಿಲ್ದಾಣದಲ್ಲಿ ನಿಂತಿದ್ದ ಪ್ರಯಾಣಿಕರು ಗಾಬರಿಗೊಂಡಿದ್ದರು. ಬಳಿಕ ಆಂಬುಲೆನ್ಸ್‌ನಲ್ಲಿ ಮೃತದೇಹವನ್ನು ಸ್ಥಳಾಂತರಿಸಲಾಯಿತು.

ADVERTISEMENT

ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.