ಬಳ್ಳಾರಿ: ತಾಲ್ಲೂಕಿನ ಹರಗಿನಡೋಣಿ ಬಳಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಜೆಸಿಬಿ ಚಾಲಕ ಮತ್ತು ಕ್ಲೀನರ್ ಮಣ್ಣಿನಗುಡ್ಡ ಕುಸಿದು ಮೃತಪಟ್ಟ ಘಟನೆ ಬುಧವಾರ ಜರುಗಿದೆ. ಬಿಹಾರ್ ರಾಜ್ಯದವರಾದ ನಾಗೇಂದ್ರ ಯಾದವ್ (44) ಮತ್ತು ಮುಖೇಶ್ ಯಾದವ್ (22) ಮೃತರು.
ಗುಡ್ಡಕೊರೆಯುವ ಸಂದರ್ಭದಲ್ಲಿ ಅಧಿಕಾರಿಗಳು ಮುಂಜಾಗ್ರತೆ ವಹಿಸದ ಪರಿಣಾಮ ಈ ಘಟನೆ ಜರುಗಿದೆ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.