ADVERTISEMENT

ಬಳ್ಳಾರಿ: ಗುಡ್ಡ ಕುಸಿತ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2021, 2:20 IST
Last Updated 18 ಸೆಪ್ಟೆಂಬರ್ 2021, 2:20 IST

ಬಳ್ಳಾರಿ: ತಾಲ್ಲೂಕಿನ ಹರಗಿನಡೋಣಿ ಬಳಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಜೆಸಿಬಿ ಚಾಲಕ ಮತ್ತು ಕ್ಲೀನರ್ ಮಣ್ಣಿನಗುಡ್ಡ ಕುಸಿದು ಮೃತಪಟ್ಟ ಘಟನೆ ಬುಧವಾರ ಜರುಗಿದೆ. ಬಿಹಾರ್ ರಾಜ್ಯದವರಾದ ನಾಗೇಂದ್ರ ಯಾದವ್ (44) ಮತ್ತು ಮುಖೇಶ್ ಯಾದವ್ (22) ಮೃತರು.

ಗುಡ್ಡಕೊರೆಯುವ ಸಂದರ್ಭದಲ್ಲಿ ಅಧಿಕಾರಿಗಳು ಮುಂಜಾಗ್ರತೆ ವಹಿಸದ ಪರಿಣಾಮ ಈ ಘಟನೆ ಜರುಗಿದೆ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT