ADVERTISEMENT

ಹಾಡು ಹಗಲೇ ನರಭಕ್ಷಕ ಚಿರತೆ ಪ್ರತ್ಯಕ್ಷ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2018, 8:37 IST
Last Updated 15 ಡಿಸೆಂಬರ್ 2018, 8:37 IST

ಕಂಪ್ಲಿ: ತಾಲ್ಲೂಕಿನ ಸೋಮಲಾಪುರ ಗ್ರಾಮದಲ್ಲಿ ಬಾಲಕನನ್ನು ಬಲಿ ಪಡೆದ ಚಿರತೆ ಶನಿವಾರ ಮಧ್ಯಾಹ್ನ ದಿಢೀರ್‌ ಪ್ರತ್ಯಕ್ಷವಾಗಿದೆ.

ಗ್ರಾಮದ ಎರದಮಟ್ಡಿ ಪ್ರದೇಶದಲ್ಲಿ ಜೆಸಿಬಿ ಯಂತ್ರದಿಂದ ಬೇಲಿ ಪೊದೆ ತೆರವುಗೊಳಿಸುತ್ತಿದ್ದ ಚಾಲಕ ಈರಣ್ಣ ಅವರಿಗೆ ಚಿರತೆ ಕಾಣಿಸಿಕೊಳ್ಳುತ್ತಿದ್ದಂತೆ ಭೀತಿಯಿಂದ ಗ್ರಾಮದ ವಸತಿ ಪ್ರದೇಶಕ್ಕೆ ಧಾವಿಸಿ ಗ್ರಾಮಸ್ಥರಿಗೆ ವಿಷಯ ತಿಳಿಸಿದರು.

ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಮುಳ್ಳು ಪೊದೆಯಲ್ಲಿ ಚಿರತೆ ಮರಿಗಳು ಇವೆ ಎನ್ನಲಾಗಿದ್ದು. ಸ್ಥಳದಲ್ಲಿ ನೂರಾರು ಗ್ರಾಮಸ್ಥರು ಬೀಡು ಬಿಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.