ADVERTISEMENT

ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2022, 12:51 IST
Last Updated 31 ಅಕ್ಟೋಬರ್ 2022, 12:51 IST
ಹೊಸಪೇಟೆಯ ವಿನಾಯಕ ನಗರದಲ್ಲಿ ಸೋಮವಾರ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ನಗರಸಭೆ ಅಧ್ಯಕ್ಷೆ ಸುಂಕಮ್ಮ ಭೂಮಿಪೂಜೆ ನೆರವೇರಿಸಿದರು
ಹೊಸಪೇಟೆಯ ವಿನಾಯಕ ನಗರದಲ್ಲಿ ಸೋಮವಾರ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ನಗರಸಭೆ ಅಧ್ಯಕ್ಷೆ ಸುಂಕಮ್ಮ ಭೂಮಿಪೂಜೆ ನೆರವೇರಿಸಿದರು   

ಹೊಸಪೇಟೆ (ವಿಜಯನಗರ): ಇಲ್ಲಿನ ವಿನಾಯಕ ನಗರದಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಲಾಯಿತು.

ನಗರಸಭೆ ಅಧ್ಯಕ್ಷೆ ಸುಂಕಮ್ಮ, ಪೌರಾಯುಕ್ತ ಮನೋಹರ್‌ ನಾಗರಾಜ್‌ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಜಿಲ್ಲಾ ಖನಿಜ ಅಭಿವೃದ್ಧಿ ಪ್ರತಿಷ್ಠಾನದಿಂದ ₹30 ಲಕ್ಷ ರೂಪಾಯಿ ಗ್ರಂಥಾಲಯಕ್ಕೆ ಬಿಡುಗಡೆಯಾಗಿದೆ. ಈ ಭಾಗದ ಜನರಿಗೆ ಇದರ ಪ್ರಯೋಜನವಾಗಲಿದೆ ಎಂದು ಹೇಳಿದರು.

ಬಡಾವಣೆಯ ಅಧ್ಯಕ್ಷ ಎಚ್. ತಿಪ್ಪೇಸ್ವಾಮಿ, ಯು.ಆಂಜಿನೇಯಲು ಮಾತನಾಡಿ, ಈ ಬಡಾವಣೆಯಲ್ಲಿ ಬೀದಿ ದೀಪಗಳು, ಅಡ್ಡರಸ್ತೆಗಳಿಗೆ ನಾಮಫಲಕ, ಸ್ವಾಗತ ಕಮಾನು ಅಳವಡಿಸಬೇಕು. ಗ್ರಂಥಾಲಯ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ವಿನಾಯಕ ನಗರ ಸೇರಿದಂತೆ ಎಲ್ಲ ವಾರ್ಡ್‌ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಕಾಮಗಾರಿಗಳು ಕಳಪೆ ಆಗದಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದರು.

ADVERTISEMENT

ರೈತ ಸಂಘದ ಉಪಾಧ್ಯಕ್ಷ ಎಸ್‌.ಎಂ. ಬಾಷಾ, ಗ್ರಂಥಾಲಯದ ಮುಖ್ಯಾಧಿಕಾರಿ ವಿನೋದ್ ಕುಮಾರ್, ಜರೀನಾ ಮೇಡಂ, ದ್ವಾರಕೀಶ್, ಜಹಾಂಗೀರ ಮೆಹಬೂಬ್ ಬಾಷ, ವೈ.ಯಮುನೇಶ್, ಪ್ರಭಾಕರ, ಮಂಜುನಾಥ, ಎಚ್.ಬಸವರಾಜಪ್ಪ, ಯಶೋದಮ್ಮ, ಶಶಿಕಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.