ಕರ್ನಾಟಕ ಲೋಕಾಯುಕ್ತ
ಬಳ್ಳಾರಿ: ಬಳ್ಳಾರಿ ತಾಲ್ಲೂಕಿನ 13, ಸಂಡೂರು ತಾಲ್ಲೂಕಿನ 1 ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಶುಕ್ರವಾರ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಪತ್ರಗಳನ್ನು ಸಂಗ್ರಹಿಸಿದರು.
‘15ನೇ ಹಣಕಾಸು ಆಯೋಗದ ಅನುದಾನದ ಬಳಕೆ ಕುರಿತು ದಾಖಲೆಗಳನ್ನು ಪರಿಶೀಲಿಸಿ, ವಶಕ್ಕೆ ಪಡೆದು ರವಾನಿಸಲು ಕೇಂದ್ರ ಕಚೇರಿಯಿಂದ ವಾರೆಂಟ್ ಬಂದಿತ್ತು. ಅದರಂತೆ ಕ್ರಮವಹಿಸಿದ್ದೇವೆ’ ಎಂದು ಬಳ್ಳಾರಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.