ADVERTISEMENT

ಹೂವಿನಹಡಗಲಿ: ಉಪ ಕಾರಾಗೃಹಕ್ಕೆ ಲೋಕಾಯುಕ್ತ ಎಸ್ಪಿ ಭೇಟಿ, ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2024, 14:21 IST
Last Updated 28 ಆಗಸ್ಟ್ 2024, 14:21 IST
ಹೂವಿನಹಡಗಲಿ ಉಪ ಕಾರಾಗೃಹಕ್ಕೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ಭೇಟಿ ನೀಡಿ ಪರಿಶೀಲಿಸಿದರು
ಹೂವಿನಹಡಗಲಿ ಉಪ ಕಾರಾಗೃಹಕ್ಕೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ಭೇಟಿ ನೀಡಿ ಪರಿಶೀಲಿಸಿದರು   

ಹೂವಿನಹಡಗಲಿ: ಇಲ್ಲಿನ ಉಪ ಕಾರಾಗೃಹಕ್ಕೆ ಬಳ್ಳಾರಿ, ವಿಜಯನಗರ ಜಿಲ್ಲಾ ಲೋಕಾಯುಕ್ತ ಎಸ್ಪಿ ಸಿದ್ದರಾಜು ಬುಧವಾರ ಭೇಟಿ ನೀಡಿ, ಹಿಂದಿನ ಜೈಲು ಅಧೀಕ್ಷಕರ ಅವಧಿಯ ದಾಖಲೆಗಳನ್ನು ಪರಿಶೀಲಿಸಿದರು.

ಇತ್ತೀಚೆಗಷ್ಟೇ ಇಲ್ಲಿಂದ ವರ್ಗಾವಣೆಯಾಗಿರುವ ಅಧೀಕ್ಷಕ ಶರಣಬಸವ ಇನಾಂದಾರ್ ಅವರು ಬಂದಿಗಳಿಗೆ ಆಹಾರ ಪೂರೈಕೆಯಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ವಿಚಾರಣಾಧೀನ ಕೈದಿಯಾಗಿದ್ದ ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ನಿರ್ದಿಷ್ಟ ಅವಧಿಯ ಕೆಲವು ದಾಖಲೆಗಳನ್ನು ಹಾಜರುಪಡಿಸಲು ಅಧಿಕಾರಿಗಳಿಗೆ ಸಿದ್ದರಾಜು ಸೂಚಿಸಿದರು.

ADVERTISEMENT

ಕಾರಾಗೃಹ ಅಧೀಕ್ಷಕ ಐ.ಜೆ. ಕುಕನೂರು, ಜೈಲು ಅಧಿಕಾರಿ ಪ್ರಕಾಶ್ ಕಾಂಬಳೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.