ಹೊಸಪೇಟೆ: ‘ಶೀಘ್ರವೇ ರಾಜ್ಯದಲ್ಲಿ ಲವ್ ಜಿಹಾದ್ ತಡೆ ಕಾನೂನು ಜಾರಿಗೆ ತಂದು ಮಹಿಳೆಯರಿಗೆ ರಕ್ಷಣೆ ಒದಗಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಈಗಾಗಲೇ ಜಾರಿಗೆ ಬಂದಿದೆ. ಅದೇ ರೀತಿ ಲವ್ ಜಿಹಾದ್ ಕಾನೂನು ಕೂಡ ಜಾರಿಗೆ ತರಲಾಗುವುದು. ಇದು ಜಾತ್ಯಾತೀತ ರಾಷ್ಟ್ರ. ಡಾ.ಬಿ.ಆರ್. ಅಂಬೇಡ್ಕರ್ ರಚಿಸಿರುವ ಸಂವಿಧಾನ ಒಪ್ಪಿಕೊಂಡಿದ್ದೇವೆ. ಆದರೆ, ಹಿಂದೂ ಸಂಸ್ಕೃತಿಯ ದೇಶ, ಹಿಂದೂ ದೇಶ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.