
ಪ್ರಜಾವಾಣಿ ವಾರ್ತೆ
ಸಿರುಗುಪ್ಪ: ನಗರದ ಹಳೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಬೆಳಗಿನ ಜಾವ ಹಾಲು ಮತ್ತು ತುಪ್ಪದ ಹಾಗೂ ವಿವಿಧ ಫಲಗಳ ಅಭಿಷೇಕ ನಡೆಸಿ, ಬಗೆಬಗೆಯ ಹೂವುಗಳಿಂದ ಅಲಂಕರಿಸಿ ಮಹಾಮಂಗಳಾರತಿ ಜರುಗಿತು.
ವ್ರತ ನಿರತ ಅಯ್ಯಪ್ಪ ಮಾಲಾಧಾರಿಗಳು ಇರುಮುಡಿ ಹೊತ್ತು ಶಬರಿಗಿರಿಗೆ ಪಯಣ ಬೆಳೆಸಿದರು. ಸಂಜೆ ದೇವಸ್ಥಾನದ ಆವರಣದಲ್ಲಿ ಮಡಿ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವ ಜರುಗಿತು. ಮಕರ ಜ್ಯೋತಿ ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.