ADVERTISEMENT

ಶ್ರೀವರವಿನ ಮಲ್ಲೇಶ್ವರ ದೇವಸ್ಥಾನ ಹುಂಡಿ ಎಣಿಕೆ: ₹2.71ಲಕ್ಷ ಸಂಗ್ರಹ

ಶ್ರೀವರವಿನ ಮಲ್ಲೇಶ್ವರ ದೇವಸ್ಥಾನ

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 16:03 IST
Last Updated 24 ಜೂನ್ 2025, 16:03 IST
ತೆಕ್ಕಲಕೋಟೆ ಸಮೀಪದ ಶ್ರೀವರವಿನ ಮಲ್ಲೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಯಿತು
ತೆಕ್ಕಲಕೋಟೆ ಸಮೀಪದ ಶ್ರೀವರವಿನ ಮಲ್ಲೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಯಿತು   

ತೆಕ್ಕಲಕೋಟೆ: ಸಮೀಪದ ಶ್ರೀವರವಿನ ಮಲ್ಲೇಶ್ವರ ದೇವಸ್ಥಾನ ಹುಂಡಿ ಎಣಿಕೆ ಕಾರ್ಯ ಮಂಗಳವಾರ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಸಿರುಗುಪ್ಪ ತಹಶೀಲ್ದಾರ್ ನರಸಪ್ಪ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕಾರ್ಯನಿರ್ವಹಣಾಧಿಕಾರಿ ಹನುಮಂತಪ್ಪ, ಪರಿವೀಕ್ಷಕಿ ಭುವನೇಶ್ವರಿ, ದೇವಸ್ಥಾನ ಸಮಿತಿ ಮಾಜಿ ಅಧ್ಯಕ್ಷ ಜೆ.ಶಿವರುದ್ರ ಗೌಡ, ಪಿಕೆಜಿ ಬ್ಯಾಂಕ್ ವ್ಯವಸ್ಥಾಪಕಿ ಜಯಶ್ರೀ, ಸದಸ್ಯರಾದ ಎ ಮಲ್ಲಿಕಾರ್ಜುನ, ಶೇಕಪ್ಪ, ವೀರೇಶ, ಮಲ್ಲಯ್ಯ, ದ್ಯಾವಣ್ಣ ಸಮ್ಮುಖದಲ್ಲಿ ಎಣಿಕೆ ಕಾರ್ಯ ನಡೆಯಿತು.

ಡಿಸೆಂಬರ್‌ನಿಂದ ಜೂನ್‌ ತಿಂಗಳ ವರೆಗೆ ಸಂಗ್ರಹವಾಗಿದ್ದ ₹2,71,790 ಮೊತ್ತವನ್ನು ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ದೇವಸ್ಥಾನದ ಖಾತೆಗೆ ಜಮಾ ಮಾಡಲಾಗುವುದು ಎಂದು ಕಾರ್ಯನಿರ್ವಹಣಾಧಿಕಾರಿ ತಿಳಿಸಿದರು.
 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.