ಹೊಸಪೇಟೆ: ಜೋಗತಿ ನೃತ್ಯದ ಮೂಲಕ ಮನೆ ಮಾತಾಗಿರುವ ತಾಲ್ಲೂಕಿನ ಮರಿಯಮ್ಮನಹಳ್ಳಿಯ ಮಂಜಮ್ಮ ಜೋಗತಿ ಅವರನ್ನು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಸರ್ಕಾರ ನೇಮಕಗೊಳಿಸಿಮಂಗಳವಾರ ಆದೇಶ ಹೊರಡಿಸಿದೆ.
ಮಂಜಮ್ಮ ಅವರು ಈ ಹಿಂದೆಜಾನಪದ ಅಕಾಡೆಮಿ ಸದಸ್ಯರಾಗಿ ಕೆಲಸ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜ್ಯ ಸೇರಿದಂತೆ ಪರರಾಜ್ಯಗಳಲ್ಲಿ ಜೋಗತಿ ನೃತ್ಯವನ್ನು ಪ್ರದರ್ಶಿಸಿ, ಅದರ ಹಿರಿಮೆಯನ್ನು ಹೆಚ್ಚಿಸಲು ಶ್ರಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.
ಅಧ್ಯಕ್ಷರಾಗಿ ನೇಮಕಗೊಂಡ ವಿಷಯಕ್ಕೆ ಸಂಬಂಧಿಸಿದಂತೆ ‘ಪ್ರಜಾವಾಣಿ’ ಅವರನ್ನು ಸಂಪರ್ಕಿಸಿದಾಗ, ‘ಸರ್ಕಾರದ ಯಾವ ಪ್ರತಿನಿಧಿಯೂ ನನ್ನನ್ನು ಇದುವರೆಗೆ ಸಂಪರ್ಕಿಸಿ ವಿಷಯ ತಿಳಿಸಿಲ್ಲ. ನನ್ನ ಸ್ನೇಹಿತರಿಂದ ವಿಷಯ ಗೊತ್ತಾಗಿದ್ದು, ಕೇಳಿ ಸಂತೋಷವಾಗಿದೆ. ದೊಡ್ಡ ಜವಾಬ್ದಾರಿ ನನ್ನ ಹೆಗಲ ಮೇಲೆ ಹಾಕಿದ್ದಾರೆ. ಅದನ್ನು ಪ್ರಾಮಾಣಿಕತೆಯಿಂದ ನಿಭಾಯಿಸಲು ಶ್ರಮಿಸುವೆ’ ಎಂದು ಮಂಜಮ್ಮ ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.