ಹೊಸಪೇಟೆ: ವಿಶ್ವವಿಖ್ಯಾತ ಹಂಪಿಗೆ ಮಂಗಳವಾರ ದೆಹಲಿಯ ಭಾರತೀಯ ಪುರಾತತ್ವ ಇಲಾಖೆಯ ಮಹಾ ನಿರ್ದೇಶಕಿ ವಿದ್ಯಾವತಿ ಅವರು ಭೇಟಿ ನೀಡಿ ಸ್ಮಾರಕಗಳನ್ನು ವಿಕ್ಷೀಸಿದರು.
ನಂತರ ಕಮಲಾಪುರದ ಹೊಟೇಲ್ವೊಂದರಲ್ಲಿ ಅಧಿಕಾರಿಗಳ ಸಭೆ ನಡೆಸಿದರು.
ಈ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಸೇರಿದಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಮೇಶ್, ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತೆ ಪೂರ್ಣಿಮಾ, ಉಪವಿಭಾಗಾಧಿಕಾರಿ ಸೈಯದ್ ತನ್ವೀರ್ ಆಸಿಫ್ ಸೇರಿದಂತೆ ಅಧಿಕಾರಿಗಳಾದ ಕಾಳಿಮುತ್ತು, ತಿಪ್ಪೇಸ್ವಾಮಿ ಹಾಗೂ ನಾಗೇಶ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.