ADVERTISEMENT

ಹೊಸಪೇಟೆಯಲ್ಲಿ ಬಿರುಸಿನ ಮಳೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 16:11 IST
Last Updated 10 ಸೆಪ್ಟೆಂಬರ್ 2020, 16:11 IST
ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯದಿಂದ ಗುರುವಾರ 50,000 ಕ್ಯುಸೆಕ್‌ಗೂ ಅಧಿಕ ನೀರು ನದಿಗೆ ಹರಿಸಿದ್ದರಿಂದ ಹಂಪಿಯ ಪುರಂದರ ಮಂಟಪ ಮುಳುಗಡೆಯಾಗಿದೆ
ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯದಿಂದ ಗುರುವಾರ 50,000 ಕ್ಯುಸೆಕ್‌ಗೂ ಅಧಿಕ ನೀರು ನದಿಗೆ ಹರಿಸಿದ್ದರಿಂದ ಹಂಪಿಯ ಪುರಂದರ ಮಂಟಪ ಮುಳುಗಡೆಯಾಗಿದೆ   

ಹೊಸಪೇಟೆ: ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಗುರುವಾರ ಸಂಜೆ ಬಿರುಸಿನ ಮಳೆಯಾಗಿದೆ.

ದಿನವಿಡೀ ಸುಡುವ ಬಿಸಿಲು, ವಿಪರೀತ ಸೆಕೆ ಇತ್ತು. ಸಂಜೆ ಕಾರ್ಮೋಡ ಕವಿದು, ವರ್ಷಧಾರೆಯಾಯಿತು. ಸಂಜೆ 7.15ರ ಸುಮಾರಿಗೆ ಆರಂಭವಾದ ಮಳೆ ಗಂಟೆಗೂ ಹೆಚ್ಚು ಸಮಯ ಸುರಿಯಿತು.

ತಾಲ್ಲೂಕಿನ ಹೊಸೂರು, ನಾಗೇನಹಳ್ಳಿ, ವ್ಯಾಸನಕೆರೆ, ಇಪ್ಪಿತ್ತೇರಿ ಮಾಗಾಣಿ, ಧರ್ಮದಗುಡ್ಡ, ಕಾಳಘಟ್ಟ ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.

ADVERTISEMENT

ಬುಧವಾರ ರಾತ್ರಿ ಕೂಡ ಉತ್ತಮ ಮಳೆಯಾಗಿತ್ತು. ಬಿರುಗಾಳಿ, ಗುಡುಗು ಮಿಂಚು ಸಹಿತ ಎರಡು ಗಂಟೆಗೂ ಅಧಿಕ ಸಮಯ ಮಳೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.