ADVERTISEMENT

ತುಂಗಭದ್ರಾ ಜಲಾಶಯಕ್ಕೆ ಆ. 17ರಂದು ಸಚಿವ ಕಾರಜೋಳ ಅವರಿಂದ ಬಾಗಿನ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2021, 11:44 IST
Last Updated 14 ಆಗಸ್ಟ್ 2021, 11:44 IST
ತುಂಗಭದ್ರಾ ಜಲಾಶಯ
ತುಂಗಭದ್ರಾ ಜಲಾಶಯ    

ಹೊಸಪೇಟೆ (ವಿಜಯನಗರ): ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಆ. 17ರಂದು ಬೆಳಿಗ್ಗೆ 9ಕ್ಕೆ ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸುವರು.

ಆ. 16ರಂದು ಮುನಿರಾಬಾದ್‌ನ ಕಾಡಾ ಕಚೇರಿಯಲ್ಲಿ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಟಿ.ಬಿ. ಡ್ಯಾಂ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿ, ಮರುದಿನ ಬೆಳಿಗ್ಗೆ ಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT