
ಪ್ರಜಾವಾಣಿ ವಾರ್ತೆ
ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಗುರುವಾರ ಶ್ರದ್ಧಾ, ಭಕ್ತಿಯಿಂದ ನಾಗರಪಂಚಮಿ ಆಚರಿಸಲಾಯಿತು.
ನಗರದ ಮಾರ್ಕಂಡೇಶ್ವರ ದೇವಸ್ಥಾನ, ವೇಣುಗೋಪಾಲ ದೇವಸ್ಥಾನ, ನಾಗಪ್ಪನ ಕಟ್ಟೆ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ತೆರಳಿ, ನಾಗರಹಾವಿನ ಕೆತ್ತನೆಗೆ ಪೂಜೆ ಸಲ್ಲಿಸಿ, ಹಾಲೆರೆದರು.
ತಾಲ್ಲೂಕಿನ ಬುಕ್ಕಸಾಗರದ ಏಳು ಹೆಡೆ ನಾಗಪ್ಪ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು. ಬೆಳಿಗ್ಗೆಯಿಂದಲೇ ವಿವಿಧ ಕಡೆಗಳಿಂದ ಭಕ್ತರು ಬಂದು ದೇವರ ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.