ADVERTISEMENT

ನಾರಾಯಣ ಗುರು ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2022, 13:02 IST
Last Updated 10 ಸೆಪ್ಟೆಂಬರ್ 2022, 13:02 IST
ಜಿಲ್ಲಾಡಳಿತದಿಂದ ಶನಿವಾರ ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾರಾಯಣ ಗುರು ಅವರ ಜಯಂತಿ ಆಚರಿಸಲಾಯಿತು
ಜಿಲ್ಲಾಡಳಿತದಿಂದ ಶನಿವಾರ ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾರಾಯಣ ಗುರು ಅವರ ಜಯಂತಿ ಆಚರಿಸಲಾಯಿತು   

ಹೊಸಪೇಟೆ (ವಿಜಯನಗರ): ಜಿಲ್ಲಾಡಳಿತದಿಂದ ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿಯನ್ನು ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಚರಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ಮಹೇಶ್ ಬಾಬು ಅವರು ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಿ, ಎಲ್ಲರಿಗೂ ಶುಭ ಕೋರಿದರು. ತಹಶೀಲ್ದಾರ್ ಬಸವರಾಜು, ಶಿರಸ್ತೆದಾರ್ ವಿರೂಪಾಕ್ಷಪ್ಪ ಶೆಟ್ಟಿ ಇತರರಿದ್ದರು.

ಈಡಿಗರ ಸಮಾಜದ ಜಿಲ್ಲಾ ಅಧ್ಯಕ್ಷ ಚಂದ್ರಣ್ಣ, ತಾಲ್ಲೂಕು ಅಧ್ಯಕ್ಷ ಕೆ. ರಾಘವೇಂದ್ರ, ಈರಣ್ಣ, ಈ. ಕುಮಾರಸ್ವಾಮಿ, ನಾರಾಯಣ ಪೂಜಾರಿ, ಪ್ರಹ್ಲಾದ್‌, ರಮೇಶ, ಶ್ರೀನಿವಾಸ, ಯರ್ರಿಸ್ವಾಮಿ, ಕೃಷ್ಣಪ್ಪ, ಎ.ಆರ್‌. ರಂಗನಗೌಡ ಇತರರಿದ್ದರು.

ADVERTISEMENT

ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ವಿಶ್ವಜೀತ್‌ ಮೆಹ್ತಾ ಅವರು ನಾರಾಯಣ ಗುರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಶಿರಸ್ತೆದಾರ್ ಶ್ರೀಧರ್, ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.