ಬಳ್ಳಾರಿ: ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಸಂಕೀರ್ಣದಲ್ಲಿ ಶನಿವಾರ ಸರಳವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಸಿಂಗ್ ಅವರ ಭಾವಚಿತ್ರಕ್ಕೆ ಪ್ರೊಬೆಷನರಿ ಐಎಎಸ್ ಅಧಿಕಾರಿ ರಾಹುಲ್ ಸಂಕನೂರ ಪುಷ್ಪ ನಮನ ಸಲ್ಲಿಸಿದರು.
ಇಲಾಖೆಯ ಸಹಾಯಕ ನಿರ್ದೇಶಕ ಹರಿಸಿಂಗ್ ರಾಥೋಡ್, ಕ್ರೀಡಾ ಸಂಕೀರ್ಣದ ವ್ಯವಸ್ಥಾಪಕ ಶಿವಕುಮಾರ ನಾಯಕ್, ಹಾಕಿ ತರಬೇತುದಾರರಾದ ಮಹ್ಮದ್ ಜಾಕಿರ್, ಜಿಲ್ಲಾ ಅಥ್ಲೆಟಿಕ್ ತರಬೇತುದಾರ ಕೆ.ಎನ್.ರಾಮಸ್ವಾಮಿ, ಷಟಲ್ ಬ್ಯಾಡ್ಮಿಂಟನ್ ತರಬೇತುದಾರ ರವಿ, ಮಲ್ಟಿ ಜಿಮ್ ತರಬೇತುದಾರ ಬಿ.ಎಸ್.ರಾಘವೇಂದ್ರ ಠಾಕೂರ್ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.