ADVERTISEMENT

ಹರಿಹರ-ಕೊಟ್ಟೂರು-ಹೊಸಪೇಟೆ ರೈಲು ಸಂಚಾರಕ್ಕೆ ಸಚಿವ ಸುರೇಶ ಅಂಗಡಿ ಚಾಲನೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2019, 7:18 IST
Last Updated 17 ಅಕ್ಟೋಬರ್ 2019, 7:18 IST
   

ಹೊಸಪೇಟೆ: ಹರಿಹರ-ಕೊಟ್ಟೂರು-ಹೊಸಪೇಟೆ ಪ್ರಯಾಣಿಕರ ರೈಲು ಸಂಚಾರಕ್ಕೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿಯವರು ಗುರುವಾರ ಇಲ್ಲಿ ಚಾಲನೆ ನೀಡಿದರು.

1994ರಿಂದ ಈ ಭಾಗದಲ್ಲಿ ಪ್ರಯಾಣಿಕರ ರೈಲು ಸಂಚಾರ ಸ್ಥಗಿತಗೊಂಡಿತ್ತು. ಸ್ಥಳೀಯರ ಸತತ ಹೋರಾಟದ ಫಲವಾಗಿ ಇಂದು ಮುಹೂರ್ತ ಕೂಡಿ ಬಂದಿದೆ.

ಹೊಸಪೇಟೆ-ಹರಿಹರ ಮಧ್ಯೆ ರೈಲು ಸಂಚಾರ ಆರಂಭಗೊಂಡಿರುವುದರಿಂದ ಮೈಸೂರು, ಹಾಸನ, ಮಂಗಳೂರಿಗೆ ನೇರ ಸಂಪರ್ಕ ದೊರದಂತಾಗಿದೆ. ಬೆಂಗಳೂರಿಗೆ ಪ್ರಯಾಣದ ಅವಧಿ ಸಾಕಷ್ಟು ಕಡಿಮೆಯಾಗಲಿದೆ. ಬಳ್ಳಾರಿ ಜಿಲ್ಲೆಯ ಪಶ್ಚಿಮ ತಾಲ್ಲೂಕುಗಳಿಗೆ ರೈಲು ಸಂಪರ್ಕ ಅನುಕೂಲವಾಗಲಿದೆ.

ADVERTISEMENT

ಸಂಸದರಾದ ಕರಡಿ ಸಂಗಣ್ಣ,ಜಿ.ಎಂ‌ಸಿದ್ದೇಶ್ವರ, ವೈ.ದೇವೇಂದ್ರಪ್ಪ, ಶಾಸಕ ಜಿ. ಸೋಮಶೇಖರ್ ರೆಡ್ಡಿ, ರೈಲ್ವೆ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಅಜಯ ಕುಮಾರ್ ಸಿಂಗ್, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.