ADVERTISEMENT

ಕಲೆಗೆ ಯಾವುದೇ ಗಡಿ ಇಲ್ಲ: ಕೆ. ರವಿಂದ್ರನಾಥ್

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2022, 15:21 IST
Last Updated 16 ನವೆಂಬರ್ 2022, 15:21 IST
ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಚಿತ್ರಕಲಾ ಶಿಬಿರದಲ್ಲಿ ಗಣ್ಯರು ಕಲಾಕೃತಿಗಳನ್ನು ಪ್ರದರ್ಶಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಚಿತ್ರಕಲಾ ಶಿಬಿರದಲ್ಲಿ ಗಣ್ಯರು ಕಲಾಕೃತಿಗಳನ್ನು ಪ್ರದರ್ಶಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು   

ಹೊಸಪೇಟೆ (ವಿಜಯನಗರ): ‘ಕಲೆಗೆ ಭಾಷೆಯ ಗಡಿದಾಟಿ ಬಾಂಧವ್ಯ ಬೆಸೆಯುವ ಸಾಮರ್ಥ್ಯ ಇದೆ. ಅದಕ್ಕೆ ಯಾವುದೇ ಗಡಿ ಇಲ್ಲ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಲಲಿತಕಲಾ ನಿಕಾಯದ ಡೀನ್‌ ಕೆ. ರವಿಂದ್ರನಾಥ್ ತಿಳಿಸಿದರು.

ಕನ್ನಡ ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದಲ್ಲಿ ಬುಧವಾರ ಹಿರಿಯ ಚಿತ್ರ ಕಲಾವಿದ ಸಂಜೀವ ಮಲ್ಲಿಕ್ ಅವರ ಸ್ಮರಣಾರ್ಥ ಆಯೋಜಿಸಿದ್ದ ‘ವರ್ಣಿಕಾ-2’ ಮೂರು ದಿನಗಳ ರಾಷ್ಟ್ರೀಯ ಚಿತ್ರಕಲಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

’ಮನುಷ್ಯರ ಭಾವನೆಗಳಿಗೆ ಜೀವ ತುಂಬುವ, ಸಂಬಂಧ ಗಟ್ಟಿಗೊಳಿಸುವ ಶಕ್ತಿ ಚಿತ್ರಗಳಿಗಿದೆ. ನಾಡಿನ ಅನೇಕ ರಾಜ ಮನೆತನಗಳು ಚಿತ್ರಕಲೆಯನ್ನು ಪೋಷಿಸಿದ್ದು, ಇದರಿಂದ ಅದರ ಮಹತ್ವ ಅರಿಯಬಹುದು. ಹಂಪಿ, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ವರ್ಣಚಿತ್ರಗಳನ್ನು ಬಿಡಿಸಿರುವುದು ನೋಡಬಹುದು ಎಂದರು.

ADVERTISEMENT

ಚರಿತ್ರೆ ವಿಭಾಗದ ಮುಖ್ಯಸ್ಥ ಟಿ.ಪಿ. ವಿಜಯ್‌ ಮಾತನಾಡಿ, ಕನ್ನಡ ವಿಶ್ವವಿದ್ಯಾಲಯದ ಮೂಲ ಆಶಯವೇ ನಾಡಿನ ಸಂಸ್ಕೃತಿ, ಕಲೆ, ಸಾಹಿತ್ಯದ ಕುರಿತು ಸಂಶೋಧನೆ ಮಾಡುವುದು ಎಂದು ಹೇಳಿದರು.

ದೃಶ್ಯಕಲಾ ವಿಭಾಗದ ಮುಖ್ಯಸ್ಥ ಮೋಹನ್‍ರಾವ್ ಬಿ. ಪಾಂಚಾಳ, ವಿದ್ಯಾರ್ಥಿಗಳಾದ ರಮೇಶ್, ಎನ್.ಜಿ ಅಂಬರೀಶ್, ಕೃಷ್ಣೇಗೌಡ, ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.