ADVERTISEMENT

ವಿಜಯನಗರದಲ್ಲಿ ಸಂಪೂರ್ಣತಗ್ಗಿದ ಕೋವಿಡ್‌ ಪ್ರಕರಣ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 15:54 IST
Last Updated 18 ಜುಲೈ 2021, 15:54 IST

ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ಯಾವುದೇ ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿಲ್ಲ.

ಕಳೆದ ಕೆಲವು ದಿನಗಳಿಂದ ಸತತವಾಗಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಕೆಯ ಹಾದಿಯಲ್ಲಿತ್ತು. ಆದರೆ, ಭಾನುವಾರ ಒಂದೇ ಒಂದು ಹೊಸ ಪ್ರಕರಣ ವರದಿಯಾಗದ ಕಾರಣ ಸಾರ್ವಜನಿಕರು ಇನ್ನಷ್ಟು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಜಿಲ್ಲೆಯ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ, ಹರಪನಹಳ್ಳಿಯಲ್ಲಿ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ. ಹೊಸಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 28 ಸಕ್ರಿಯ ಪ್ರಕರಣಗಳಿದ್ದರೆ, ಹರಪನಹಳ್ಳಿಯಲ್ಲಿ 19, ಹಗರಿಬೊಮ್ಮನಹಳ್ಳಿಯಲ್ಲಿ 14 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಹೂವಿನಹಡಗಲಿಯಲ್ಲಿ 10, ಕೂಡ್ಲಿಗಿಯಲ್ಲಿ ಮೂರು ಸಕ್ರಿಯ ಪ್ರಕರಣಗಳಿವೆ.

ADVERTISEMENT

ಅಷ್ಟೇ ಅಲ್ಲ, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಕೂಡ ನಿಂತಿದ್ದು, ಕಳೆದೆರಡು ದಿನಗಳಿಂದ ಸಾವಿನ ಪ್ರಕರಣಗಳು ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.