ADVERTISEMENT

ವೈದ್ಯಾಧಿಕಾರಿಯಿಂದ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ ಶುಶ್ರೂಷಕಿ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 5:13 IST
Last Updated 19 ಡಿಸೆಂಬರ್ 2025, 5:13 IST
<div class="paragraphs"><p> ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಮರಿಯಮ್ಮನಹಳ್ಳಿ: ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುಳಾ ಅವರು ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಗುರುವಾರ ಕೇಂದ್ರದ ಗುತ್ತಿಗೆ ಆಧಾರಿತ ಶುಶ್ರೂಷಕಿ ಕೆ.ಸುನೀತಾ ಎಂಬುವರು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಪಟ್ಟಣದ ಮುಖಂಡರು ಕೇಂದ್ರಕ್ಕೆ ಭೇಟಿ ನೀಡಿ, ‘ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡುತ್ತಿರುವ  ಡಾ.ಮಂಜುಳಾ ಅವರನ್ನು ಕೂಡಲೇ ವರ್ಗಾವಣೆ ಮಾಡಿ’ ಎಂdಉ ತಾಲ್ಲೂಕು ಪ್ರಭಾರ ವೈದ್ಯಾಧಿಕಾರಿ ಡಾ.ವಿನೋದ್ ಅವರಿಗೆ ಮನವಿ ಸಲ್ಲಿಸಿದರು.

ADVERTISEMENT

ಡಾ. ವಿನೋದ ಮಾತನಾಡಿ, ‘ವೈದ್ಯಾಧಿಕಾರಿ ಡಾ.ಮಂಜುಳಾ ಅವರು ಗೈರಾಗಿದ್ದಾರೆ.  ಜಿಲ್ಲಾ ಆರೋಗ್ಯಾಧಿಕಾರಿಯವರ ಗಮನಕ್ಕೆ ತಂದು ಕ್ರಮ ಕೈಗೊಳ್ಳುವುದರ ಜೊತೆಗೆ ಬೇರೆಡೆಗೆ ತಾತ್ಕಾಲಿಕ ನಿಯೋಜನೆ ಮಾಡಲಾಗುವುದು’ ಎಂದರು.

ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ, ಮಂಜುನಾಥ, ಪ್ರಸನ್ನ ಸೇರಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೋವಿಂದರ ಪರಶುರಾಮ, ಮುಖಂಡರಾದ ಎಲೆಗಾರ ಮಂಜುನಾಥ, ಪಿ.ಸೋಮಪ್ಪ, ವಿಶ್ವನಾಥ, ರಾಜ, ಎಚ್.ರಮೇಶ್, ಜಿ.ವಿರೂಪಾಕ್ಷ, ಬಸವರಾಜ, ಕೆ.ಮಂಜುನಾಥ, ಪರಶುರಾಮ, ಅಂಕ್ಲೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.