ADVERTISEMENT

ಪ್ರಾಧಿಕಾರ ರಚನೆಗೆ ವಿರೋಧ

ತಹಶೀಲ್ದಾರ್ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಧರಣಿ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 1:43 IST
Last Updated 18 ನವೆಂಬರ್ 2020, 1:43 IST
ಹಗರಿಬೊಮ್ಮನಹಳ್ಳಿ ಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ತಹಶೀಲ್ದಾರ್ ಶರಣಮ್ಮ ಅವರಿಗೆ ಮನವಿ ಸಲ್ಲಿಸಿದರು
ಹಗರಿಬೊಮ್ಮನಹಳ್ಳಿ ಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ತಹಶೀಲ್ದಾರ್ ಶರಣಮ್ಮ ಅವರಿಗೆ ಮನವಿ ಸಲ್ಲಿಸಿದರು   

ಹಗರಿಬೊಮ್ಮನಹಳ್ಳಿ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡರ ಬಣ) ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದರು.

ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಬುಡ್ಡಿ ಬಸವರಾಜ್ ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದರ ಮೂಲಕ ಕನ್ನಡಿಗರಿಗೆ ದ್ರೋಹ ಬಗೆಯುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನವನ್ನು ಕೊಡಲಾಗದ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಯಾವ ಪುರುಷಾರ್ಥಕ್ಕಾಗಿ ರಚನೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಕನ್ನಡಿಗರನ್ನು ಕೆರಳಿಸುತ್ತಿದ್ದಾರೆ. ಮರಾಠಿಗರನ್ನು ಕನ್ನಡಿಗರ ತಲೆಯ ಮೇಲೆ ಕೂಡಿಸಲು ಹೊರಟಿರುವುದನ್ನು ನೋಡಿದರೆ ಇದು ಕನ್ನಡದ್ರೋಹಿ ಕೆಲಸ ಎನ್ನಲೇಬೇಕು.

ADVERTISEMENT

ಕೂಡಲೇ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದನ್ನು ಕೈಬಿಟ್ಟು ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಮೂಲಕ ಕನ್ನಡ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನವನ್ನು ಕೊಡುವ ಕೆಲಸ ಮಾಡಲು ಸರ್ಕಾರ ಮುಂದಾಗಲಿ ಎಂದು ಒತ್ತಾಯಿಸಿದರು.

ತಹಶೀಲ್ದಾರ್ ಶರಣಮ್ಮ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ವೇದಿಕೆ ಮುಖಂಡರಾದ ವಿಶ್ವನಾಥ್, ರಮೇಶ್, ಫಕೀರಪ್ಪ,ವೀರೇಶ್, ಎಚ್. ಮಂಜುನಾಥ, ಪಾಂಡು ನಾಯಕ, ಲೋಕೇಶ್, ಹನು ಮಂತ, ಕಾಳೇಶ್, ಕರಿಯಪ್ಪ, ತಿಪ್ಪಣ್ಣ, ನಾಗರಾಜ್,ಕಡ್ಲೆಪ್ಪ,ಕಾಶೀಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.