ADVERTISEMENT

ಕುರುಗೋಡು | ಬಣವೆಗೆ ಬೆಂಕಿ: ₹60 ಸಾವಿರ ನಷ್ಟ

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 1:49 IST
Last Updated 8 ಜನವರಿ 2026, 1:49 IST
<div class="paragraphs"><p>ಬೆಂಕಿ ಅವಘಡ</p></div>

ಬೆಂಕಿ ಅವಘಡ

   

ಕುರುಗೋಡು: ತಾಲ್ಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸಟ್ಟು ಭಸ್ಮವಾದ ಘಟನೆ ಮಂಗಳವಾರ ಜರುಗಿದೆ.

ರೈತ ಬಾಷಾ ಅವರಿಗೆ ಸೇರಿದ 10 ಎಕರೆಯಲ್ಲಿ ಬೆಳೆದ ಭತ್ತದ ಹುಲ್ಲಿನ ಬಣವೆ ಸುಟ್ಟು ಭಸ್ಮವಾಗಿದೆ. ಕುರುಗೋಡಿನ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿತು. ಘಟನೆಯಲ್ಲಿ ₹60 ಸಾವಿರ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಗಿದೆ.

ADVERTISEMENT

ಘಟನೆ ನಿಖರ ಕಾರಣ ತಿಳಿದುಬಂದಿಲ್ಲ. ದಾರಿಹೋಕರು ಬೀಡಿ ಸೇದಿ ಬಿಸಾಡಿರಬಹುದು ಎಂದು ಶಂಕಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.