ಹಗರಿಬೊಮ್ಮನಹಳ್ಳಿ: 2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಕೂಡಲಸಂಗಮದಿಂದಪಟ್ಟಣಕ್ಕೆ ಆಗಮಿಸಿದ ಜಯಮೃತ್ಯುಂಜಯ ಸ್ವಾಮೀಜಿಗಳಿಗೆ ಶನಿವಾರ ಅದ್ಧೂರಿ ಸ್ವಾಗತ ಕೋರಲಾಯಿತು.
ಪಾದಯಾತ್ರೆಯು 10ನೇ ದಿನವಾದ ಶನಿವಾರ 235 ಕಿಮೀ ದೂರ ಕ್ರಮಿಸಿದೆ.
ತಾಲ್ಲೂಕಿನ ಹೊಸ ಆನಂದೇವನಹಳ್ಳಿಯಲ್ಲಿ ಶುಕ್ರವಾರ ತಂಗಿದ್ದ ಸ್ವಾಮೀಜಿ ಬೆಳಿಗ್ಗೆ 11 ಗಂಟೆಗೆ ಪಾದಯಾತ್ರೆ ಆರಂಭಿಸಿದರು.
ಸಂಸದ ವೈ. ದೇವೇಂದ್ರಪ್ಪ, ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ, ಎಸ್. ಭೀಮನಾಯ್ಕ, ಮುಖಂಡರಾದ ವಿಜಯಾನಂದ ಕಾಶಪ್ಪನವರ್, ಬಾವಿ ಬೆಟ್ಟಪ್ಪ, ಕೆ. ನೇಮಿರಾಜನಾಯ್ಕ ಪಾಲ್ಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.