ಹೊಸಪೇಟೆ: ‘ತುಂಗಭದ್ರಾ ಜಲಾಶಯದಲ್ಲಿ ತುಂಬಿಕೊಂಡಿರುವ ಹೂಳು ತೆಗೆಯಲು ಆಡಳಿತ ಮಂಡಳಿ ಅನುಮತಿ ನೀಡಬೇಕು’ ಎಂದು ತುಂಗಭದ್ರಾ ರೈತ ಸಂಘದ ಜಿಲ್ಲಾ ಅಧ್ಯಕ್ಷ ಜಿ. ಪುರುಷೋತ್ತಮಗೌಡ ಮನವಿ ಮಾಡಿದ್ದಾರೆ.
ಈ ಸಂಬಂಧ ಅವರು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
‘ಸತತ ಎರಡು ವರ್ಷಗಳಿಂದ ಅಣೆಕಟ್ಟೆಯಿಂದ ಹೂಳು ತೆಗೆದು ರೈತರ ಜಮೀನುಗಳಿಗೆ ಹಾಕುತ್ತಿದ್ದೇವೆ. ಈ ಕೆಲಸಕ್ಕೆ ಜಿಲ್ಲೆಯ ವಿವಿಧ ಸ್ವಾಮೀಜಿಗಳು, ಸಂಘ ಸಂಸ್ಥೆಗಳ ಮುಖಂಡರು, ರೈತರು ಸಹಕಾರ ಕೊಟ್ಟಿದ್ದಾರೆ. ಈ ವರ್ಷ ಕೂಡ ಹೂಳು ತೆಗೆಯಲು ಅನುಮತಿ ಕೊಡಬೇಕು’ ಎಂದು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.