ADVERTISEMENT

ಗಣೇಶೋತ್ಸವಕ್ಕೆ ಅನುಮತಿ ನೀಡಿ

ವಿಶ್ವ ಹಿಂದೂ ಪರಿಷತ್, ಭಜರಂಗದಳ ಮನವಿ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2021, 3:50 IST
Last Updated 4 ಸೆಪ್ಟೆಂಬರ್ 2021, 3:50 IST
ಸಿರುಗುಪ್ಪದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಶಿರಸ್ತೇದಾರ್ ಎನ್.ಬಾಬು ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು
ಸಿರುಗುಪ್ಪದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಶಿರಸ್ತೇದಾರ್ ಎನ್.ಬಾಬು ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು   

ಸಿರುಗುಪ್ಪ: ಅತಿದೊಡ್ಡ ಹಬ್ಬವಾದ ಗಣೇಶೋತ್ಸವವನ್ನು ಕೋವಿಡ್-19ನ ಮೂರನೇ ಅಲೆಯ ನೆಪವೊಡ್ಡಿ ನಿಷೇದ ಹೇರುವುದು ಸರಿಯಲ್ಲ ಎಂದು ಭಜರಂಗ ದಳದ ತಾಲೂಕು ಸಂಯೋಜಕ ಎಂ.ಆರ್.ಹೇಮನಗೌಡ ಅಸಮಧಾನ ವ್ಯಕ್ತಪಡಿಸಿದರು.

ಗಣೇಶೋತ್ಸವಕ್ಕೆ ಅನುಮತಿ ಕೇಳಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮುಖ್ಯಮಂತ್ರಿಗೆ ಬರೆದ ಪತ್ರವನ್ನು ಶಿರಸ್ತೇದಾರ್ ಎನ್.ಬಾಬು ಅವರಿಗೆ ಗುರುವಾರ ಸಲ್ಲಿಸಿ ಮಾತನಾಡಿದರು.

ಗಣೇಶೋತ್ಸವ ನಿಷೇಧ ಮಾಡಿ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಂತಾಗಿದ್ದು ಆಚರಣೆಗೆ ಮುಕ್ತ ಅವಕಾಶ ಮಾಡಿಕೊಡಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.

ADVERTISEMENT

ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಉಪಾಧ್ಯಕ್ಷ ಆನಂದ ಹೆಗಡೆ, ಚನ್ನಬಸವ, ಮನೋಹರ, ಗೋಪಾಲಕೃಷ್ಣ, ಶಿವಕುಮಾರ್, ಶಾಂತಸ್ವಾಮಿ, ಮಂಜುನಾಥಸ್ವಾಮಿ, ಶ್ರೀನಿವಾಸ, ಪಣೀಂದ್ರ ಈ ಸಂದರ್ಭದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.