ADVERTISEMENT

ವಿರೂಪಾಕ್ಷನಿಗೆ ಸುವರ್ಣ ಮುಕುಟ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2019, 15:15 IST
Last Updated 13 ಡಿಸೆಂಬರ್ 2019, 15:15 IST
ಹಂಪಿ ವಿರೂಪಾಕ್ಷೇಶ್ವರನಿಗೆ ಶುಕ್ರವಾರ ನವರತ್ನ ಖಚಿತವಾದ ಸುವರ್ಣ ಮುಕುಟ ತೊಡಿಸಿ ಪೂಜೆ ಸಲ್ಲಿಸಲಾಯಿತು
ಹಂಪಿ ವಿರೂಪಾಕ್ಷೇಶ್ವರನಿಗೆ ಶುಕ್ರವಾರ ನವರತ್ನ ಖಚಿತವಾದ ಸುವರ್ಣ ಮುಕುಟ ತೊಡಿಸಿ ಪೂಜೆ ಸಲ್ಲಿಸಲಾಯಿತು   

ಹೊಸಪೇಟೆ: ಫಲಪೂಜಾ ಮಹೋತ್ಸವದ ಪ್ರಯುಕ್ತ ತಾಲ್ಲೂಕಿನ ಹಂಪಿ ವಿರೂಪಾಕ್ಷೇಶ್ವರನಿಗೆ ಶುಕ್ರವಾರ ವಿಜಯನಗರ ಕಾಲದ ನವರತ್ನ ಖಚಿತವಾದ ಸುವರ್ಣಮುಕುಟ ತೊಡಿಸಿ, ವಿಶೇಷ ರೀತಿಯಲ್ಲಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.

ವಿದ್ಯಾರಣ್ಯ ಮಠದ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ವಿವಿಧ ಕಡೆಗಳಿಂದ ನೂರಾರು ಸಂಖ್ಯೆಯಲ್ಲಿ ಜನ ಬಂದು ದೇವರ ದರ್ಶನ ಪಡೆದರು. ದಿನವಿಡೀ ಭಕ್ತರು ದೇಗುಲಕ್ಕೆ ಬಂದು ಹೋದರು.

ಶನಿವಾರ ದೇವಸ್ಥಾನದ ಅಂಗಳದಲ್ಲಿ ದೀಪೋತ್ಸವ ಕಾರ್ಯಕ್ರಮ ನೆರವೇರಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.