ADVERTISEMENT

ಬಳ್ಳಾರಿ: ಹತ್ತೇ ದಿನಕ್ಕೆ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೊಟ್ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 4:01 IST
Last Updated 24 ನವೆಂಬರ್ 2020, 4:01 IST
ಪ್ರೀತಿ ಗೆಹ್ಲೋಟ್
ಪ್ರೀತಿ ಗೆಹ್ಲೋಟ್   

ಬಳ್ಳಾರಿ: ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತೆಯಾಗಿ ನ.13 ರಂದು ಅಧಿಕಾರ ಸ್ವೀಕರಿಸಿದ್ದ 2016ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೊಟ್ ಅವರನ್ನು‌ ಹತ್ತೇ ದಿನದಲ್ಲಿ‌ ಸರ್ಕಾರ ವರ್ಗಾವಣೆ ಮಾಡಿದೆ.

ಕಾರವಾರ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನೆ ಸಂಸ್ಥೆಯ ಆಡಳಿತಾಧಿಕಾರಿಯಾಗಿದ್ದ ಕೆಎಎಸ್ ಕಿರಿಯ ಶ್ರೇಣಿ ಎನ್. ಮಹೇಶಬಾಬು ಅವರನ್ನು ಪಾಲಿಕೆಗೆ ವರ್ಗಾಯಿಸಿ ಸೋಮವಾರ ಆದೇಶ ಹೊರಬಿದ್ದಿದೆ.

ಸಾರ್ವಜನಿಕ‌ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರನ್ನಾಗಿ ಗೆಹ್ಲೋಟ್ ಅವರನ್ನು ವರ್ಗಾಯಿಸಿ ಹೊರಡಿಸಿದ್ದ ಆದೇಶವನ್ನು ರದ್ದು ಪಡಿಸಿ ಪಾಲಿಕೆಗೆ ವರ್ಗಾಯಿಸಲಾಗಿತ್ತು.

ADVERTISEMENT

ಪಾಲಿಕೆ ಆಯುಕ್ತರ ಹುದ್ದೆಯನ್ನು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ಸರಿಸಮಾನವಾಗಿ ಮೇಲ್ದರ್ಜೆಗೆ ಏರಿಸಿ ವರ್ಗಾವಣೆ ಆದೇಶ ಹೊರಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.