ADVERTISEMENT

ತೆಕ್ಕಲಕೋಟೆ: ಆದಿಮಾನವನ ಮತ್ತೊಂದು ಅಸ್ಥಿಪಂಜರ ಪತ್ತೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2026, 0:30 IST
Last Updated 9 ಫೆಬ್ರುವರಿ 2026, 0:30 IST
ತೆಕ್ಕಲಕೋಟೆ ಪಟ್ಟಣದಲ್ಲಿ ಉತ್ಖನನದ ವೇಳೆ ಭಾನುವಾರ ಸಿಕ್ಕಿರುವ ಅಸ್ಥಿಪಂಜರ.
ತೆಕ್ಕಲಕೋಟೆ ಪಟ್ಟಣದಲ್ಲಿ ಉತ್ಖನನದ ವೇಳೆ ಭಾನುವಾರ ಸಿಕ್ಕಿರುವ ಅಸ್ಥಿಪಂಜರ.   

ತೆಕ್ಕಲಕೋಟೆ (ಬಳ್ಳಾರಿ ಜಿಲ್ಲೆ): ಪಟ್ಟಣದ ಗೌಡ್ರಮೂಲೆ ಬೆಟ್ಟದಲ್ಲಿ ನಡೆಯುತ್ತಿರುವ ಉತ್ಖನನ ಸ್ಥಳದಲ್ಲಿ ಶನಿವಾರ 3,500 ದಿಂದ 5,000 ವರ್ಷಗಳ ಹಿಂದಿನದ್ದು ಎನ್ನಲಾದ, ಆದಿಮಾನವನ ಮತ್ತೊಂದು ಅಸ್ಥಿಪಂಜರ ದೊರೆತಿದೆ. ಸೂಕ್ಷ್ಮ ಶಿಲಾಯುಗದ ಪರಿಕರಗಳೂ ಪತ್ತೆ ಆಗಿವೆ.

‘ಕೆಲ ದಿನಗಳ ಹಿಂದೆಯಷ್ಟೇ ಅಸ್ಥಿಪಂಜರ ಕಂಡುಬಂದಿತ್ತು. ಈಗ ಮತ್ತೊಂದು ಸಿಕ್ಕಿದೆ. ಎದೆಯ ಭಾಗದ ಮೇಲೆ ದೊಡ್ಡಗಾತ್ರದ ಕಲ್ಲು ಇರಿಸಿ ಸಮಾಧಿ ಮಾಡಲಾಗಿದೆ. ಅದನ್ನು ಸರಿಸಿದರೆ ಪಳೆಯುಳಿಕೆಗೆ ಧಕ್ಕೆ ಆಗಬಹುದು. ಆದ್ದರಿಂದ ಕಲ್ಲನ್ನು ಹಾಗೆಯೇ ಬಿಟ್ಟಿದ್ದೇವೆ’ ಎಂದು ಅಮೆರಿಕದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಹಾಗೂ ಉತ್ಖನನ ಕಾರ್ಯದ ಸಹ ನಿರ್ದೇಶಕಿ ನಮಿತಾ ಎಸ್. ಸುಗಂಧಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT