ADVERTISEMENT

ಮೂಲಸೌಕರ್ಯಕ್ಕೆ ಆಗ್ರಹಿಸಿ ತುಂಗಭದ್ರಾಮಂಡಳಿ ಕಚೇರಿ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 13:20 IST
Last Updated 4 ಜನವರಿ 2021, 13:20 IST
ಹೊಸಪೇಟೆಯ ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಕಚೇರಿ ಎದುರು ಸೋಮವಾರ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ತುಂಗಭದ್ರಾ ಜಂಟಿ ಹೋರಾಟ ಕ್ರಿಯಾ ಸಮಿತಿ ಮುಖಂಡ ಡಿ. ವೆಂಕಟರಮಣ ಮಾತನಾಡಿದರು
ಹೊಸಪೇಟೆಯ ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಕಚೇರಿ ಎದುರು ಸೋಮವಾರ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ತುಂಗಭದ್ರಾ ಜಂಟಿ ಹೋರಾಟ ಕ್ರಿಯಾ ಸಮಿತಿ ಮುಖಂಡ ಡಿ. ವೆಂಕಟರಮಣ ಮಾತನಾಡಿದರು   

ಹೊಸಪೇಟೆ: ನಿಶಾನಿ ಕ್ಯಾಂಪ್‌ ಸೇರಿದಂತೆ ತುಂಗಭದ್ರಾ ಜಲಾಶಯ ನಿರ್ಮಾಣದ ಸಂದರ್ಭದಲ್ಲಿ ಬಂದು ನೆಲೆಸಿದ ಜನವಸತಿ ಪ್ರದೇಶಗಳಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಸೋಮವಾರ ತುಂಗಭದ್ರಾ ಜಂಟಿ ಹೋರಾಟ ಕ್ರಿಯಾ ಸಮಿತಿ ನೇತೃತ್ವದಲ್ಲಿ ನಗರದ ತುಂಗಭದ್ರಾ ಮಂಡಳಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ಮಂಡಳಿ ಕಾರ್ಯದರ್ಶಿ ಜಿ. ನಾಗಮೋಹನ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಿರ್ಮಾಣ ಕಾರ್ಯ ಸೇರಿದಂತೆ ಇತರೆ ಕೆಲಸಗಳಿಗಾಗಿ ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ಇತರೆ ರಾಜ್ಯಗಳಿಂದ ಅನೇಕ ಜನ ಜಲಾಶಯ ನಿರ್ಮಾಣದ ಸಂದರ್ಭದಲ್ಲಿ ಬಂದು ಇಲ್ಲಿಯೇ ನೆಲೆಸಿದ್ದಾರೆ. ಆದರೆ, ಆ ಪ್ರದೇಶದಲ್ಲಿ ಮೂಲಸೌಕರ್ಯ ಕಲ್ಪಿಸದೆ ನಿರ್ಲಕ್ಷಿಸಲಾಗಿದೆ. ಹಲವು ಸಲ ಈ ಸಂಬಂಧ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಗೋಳು ತೋಡಿಕೊಂಡಿದ್ದಾರೆ.

ತುಂಗಭದ್ರಾ ಮಂಡಳಿಯಿಂದ ನಿರ್ಮಿಸಿ ಕೊಟ್ಟಿರುವ ಮನೆಗಳ ದುರಸ್ತಿ ಮಾಡಿಕೊಡಬೇಕು. ಈಗ ಹೆಚ್ಚಿಸಿರುವ ಬಾಡಿಗೆ ಅಧಿಕವಾಗಿದ್ದು, ಅದನ್ನು ಕೈಬಿಡಬೇಕು. ಮಂಡಳಿ ತನ್ನ ಬಳಿ ಉಳಿಸಿಕೊಂಡಿರುವ ಜಾಗವನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಿ, ಅಲ್ಲಿ ವಾಸವಾಗಿರುವವರಿಗೆ ಕಾನೂನು ಪ್ರಕಾರ ನಿವೇಶನ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಮುಖಂಡ ಡಿ. ವೆಂಕಟರಮಣ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.