ADVERTISEMENT

ರಾಬಕೊವಿ ಚುನಾವಣೆ: ಇಬ್ಬರಿಂದ ನಾಮಪತ್ರ

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 14:21 IST
Last Updated 1 ಜುಲೈ 2025, 14:21 IST
<div class="paragraphs"><p>ನಂದಿನಿ ಹಾಲು</p></div>

ನಂದಿನಿ ಹಾಲು

   

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಎರಡನೇಯ ದಿನವಾದ ಮಂಗಳವಾರ ಎರಡು ನಾಮಪತ್ರ ಸಲ್ಲಿಕೆಯಾಗಿವೆ.

ವಿಜಯನಗರ ಜಿಲ್ಲೆಯ ಜಿ.ನಾಗಮಣಿ ಎರಡು ಉಮೇದುವಾರಿಕೆ ಸಲ್ಲಿಸಿದ್ದಾರೆ.

ADVERTISEMENT

ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನ. ಜುಲೈ 3ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅದೇ ದಿನ ಕ್ರಮಬದ್ಧ ನಾಮಪತ್ರಗಳ ಘೋಷಣೆ ಮಾಡಲಾಗುತ್ತದೆ.

ನಾಮಪತ್ರ ಹಿಂಪಡೆಯಲು ಜುಲೈ 4 ಕೊನೆಯ ದಿನ. ಜುಲೈ 10ರಂದು ಮತದಾನ ನಡೆಯಲಿದೆ. ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ ಎಂದು ರಾಬಕೊವಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಚುನಾವಣಾಧಿಕಾರಿ ಪಿ.ಪ್ರಮೋದ್ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.