ADVERTISEMENT

ಲೋಕಸಭೆ ಚುನಾವಣೆ | ಏ.26ಕ್ಕೆ ರಾಹುಲ್‌ಗಾಂಧಿ ಬಳ್ಳಾರಿಗೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2024, 14:17 IST
Last Updated 24 ಏಪ್ರಿಲ್ 2024, 14:17 IST
ರಾಹುಲ್‌ಗಾಂಧಿ
ರಾಹುಲ್‌ಗಾಂಧಿ   

ಬಳ್ಳಾರಿ: ‘ಕಾಂಗ್ರೆಸ್‌ನ ನಾಯಕ ರಾಹುಲ್‌ಗಾಂಧಿ ಅವರು ಶುಕ್ರವಾರ (ಏಪ್ರಿಲ್ 26) ಬಳ್ಳಾರಿಗೆ ಬರಲಿದ್ದು, ಅಂದು ಸಂಜೆ 4 ಗಂಟೆಗೆ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ನಡೆಯುವ ಲೋಕಸಭಾ ಚುನಾವಣಾ ಕಾಂಗ್ರೆಸ್ ಪ್ರಚಾರದ ಸಮಾವೇಶದಲ್ಲಿ ಪಾಲ್ಗೊಳ್ಳುವರು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ತಿಳಿಸಿದರು.

‘ರಾಹುಲ್ ಗಾಂಧಿ ಅವರು ಬಳ್ಳಾರಿ ಮತ್ತು ಕೊಪ್ಪಳ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸುವರು. ಸಮಾವೇಶಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT