ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಹಲವೆಡೆ ಭಾನುವಾರ ತಡರಾತ್ರಿ ಬಿರುಗಾಳಿ ಸಮೇತ ಮಳೆಯಾಗಿದ್ದು, ವಾತಾವರಣ ತಂಪಾಗಿತ್ತು.
ಬಿರುಗಾಳಿ ಮಳೆಗೆ ಹೂವಿನಹಡಗಲಿ ತಾಲ್ಲೂಕಿನ ಹಿರೇಬನ್ನಿಮಟ್ಟಿಯಲ್ಲಿ ಗಳಗನಾಥ ಹಾಲೇಶ್ ಎಂಬುವರ ಐದು ಎಕರೆ ಬಾಳೆತೋಟ ಸಂಪೂರ್ಣ ನೆಲಕಚ್ಚಿದೆ. ವಿದ್ಯುತ್ ಕಂಬ ನೆಲಕ್ಕುರುಳಿದೆ.
ಕೂಡ್ಲಿಗಿಯಲ್ಲಿ ಮುಕ್ಕಾಲು ತಾಸು ಮಳೆಯಾದರೆ, ಕೊಟ್ಟೂರು, ಹೊಸಪೇಟೆ, ಸಂಡೂರು ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.