ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಶುಕ್ರವಾರ ಸತತ ಎರಡನೇ ದಿನವೂ ಮಳೆಯಾಗಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೆಲನಿಮಿಷ ವರ್ಷಧಾರೆಯಾಯಿತು. ಅನಂತರ ಬಿಡುವು ಕೊಟ್ಟು, ಮಧ್ಯಾಹ್ನ 3.30ರಿಂದ ಸಂಜೆ 5ರ ವರೆಗೆ ಬಿರುಸಿನ ಮಳೆಯಾಯಿತು. ತಾಲ್ಲೂಕಿನ ಹಂಪಿ, ಕಮಲಾಪುರ, ಧರ್ಮದಗುಡ್ಡ, ಕಾಳಘಟ್ಟ, ನಾಗೇನಹಳ್ಳಿ, ಬಸವನದುರ್ಗ, ಹೊಸೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಗುರುವಾರವೂ ಮೂರ್ನಾಲ್ಕು ಗಂಟೆ ಮಳೆಯಾಗಿತ್ತು. ಸತತ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ. ಮಳೆಯಿಲ್ಲದೆ ಆತಂಕಗೊಂಡಿದ್ದ ರೈತರ ಮೊಗದಲ್ಲಿ ಹರ್ಷ ಮೂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.