ಹೊಸಪೇಟೆ: ತಾಲ್ಲೂಕಿನ ಹಂಪಿ, ಕಮಲಾಪುರದ ಕೆಲವು ಭಾಗಗಳಲ್ಲಿ ಭಾನುವಾರ ಸಂಜೆ ಕೆಲಕಾಲ ತುಂತುರು ಮಳೆಯಾಗಿದೆ.
ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಬೆಳಿಗ್ಗೆಯಿಂದ ಮೋಡ ಹಾಗೂ ಮಂಜು ಕವಿದ ವಾತಾವರಣ ಇತ್ತು. ಸಂಜೆ ಅಲ್ಲಲ್ಲಿ ತುಂತುರು ಮಳೆಯಾಗಿದ್ದರಿಂದ ವಾತಾವರಣ ಸಂಪೂರ್ಣ ತಂಪಾಗಿತ್ತು. ರಜೆ ಹಾಗೂ ತಂಪಾದ ವಾತಾವರಣ ಇದ್ದ ಕಾರಣ ಪ್ರಮುಖ ರಸ್ತೆಗಳಲ್ಲಿ ಜನಸಂಚಾರ ವಿರಳವಾಗಿತ್ತು.
ಹಂಪಿ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರು ಸೂರ್ಯಾಸ್ತ ನೋಡಲಿಕ್ಕಾಗದೆ ನಿರಾಶರಾಗಿ ಹಿಂತಿರುಗಬೇಕಾಯಿತು. ಕೆಲವರು ತುಂತುರು ಮಳೆಯಲ್ಲೇ ಓಡಾಡಿ ಸಂಭ್ರಮಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.