ಹೊಸಪೇಟೆ: ನಗರ ಸೇರಿದಂತೆ ತಾಲ್ಲೂಕಿನ ಹಲವು ಕಡೆಗಳಲ್ಲಿ ಮಂಗಳವಾರ ಬಿರುಗಾಳಿ ಸಮೇತ ಬಿರುಸಿನ ಮಳೆಯಾಗಿದೆ.
ನಾಲ್ಕು ಗಂಟೆ ಸುಮಾರಿಗೆ ಆರಂಭವಾದ ಮಳೆ ಸುಮಾರು ಹದಿನೈದು ನಿಮಿಷದ ವರೆಗೆ ಸುರಿದಿದೆ.
ಬಿರುಗಾಳಿಯಿಂದಾಗಿ ಹಲವು ಕಡೆಗಳಲ್ಲಿ ಮರಗಳ ಕೊಂಬೆಗಳು ಬಾಗಿದ್ದವು. ಸುಡುವ ಬಿಸಿಲಿನಿಂದ ಕಂಗೆಟ್ಟಿದ್ದ ಜನ ಮಳೆಯಿಂದ ಸ್ವಲ್ಪ ನಿಟ್ಟುಸಿರು ಬಿಟ್ಟರು.
ತಾಲ್ಲೂಕಿನ ಹೊಸೂರು, ನಾಗೇನಹಳ್ಳಿ, ಬಸವನದುರ್ಗ, ಕಮಲಾಪುರ, ಹಂಪಿ, ಬೈಲುವದ್ದಿಗೇರಿ, ಧರ್ಮಸಾಗರ, ಕಾಕುಬಾಳು ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.