ADVERTISEMENT

ತಾಲ್ಲೂಕಿನಾದ್ಯಂತ ಬಿರುಸಿನ ಮಳೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 13:06 IST
Last Updated 3 ಜುಲೈ 2019, 13:06 IST
ಬುಧವಾರ ಮಧ್ಯಾಹ್ನ ಸುರಿದ ಮಳೆಯಲ್ಲೇ ವ್ಯಕ್ತಿಯೊಬ್ಬರು ಬೈಸಿಕಲ್‌ ತುಳಿಯುತ್ತ ಹೊಸಪೇಟೆಯ ಮೇನ್‌ ಬಜಾರ್‌ ಮೂಲಕ ಹಾದು ಹೋದರು
ಬುಧವಾರ ಮಧ್ಯಾಹ್ನ ಸುರಿದ ಮಳೆಯಲ್ಲೇ ವ್ಯಕ್ತಿಯೊಬ್ಬರು ಬೈಸಿಕಲ್‌ ತುಳಿಯುತ್ತ ಹೊಸಪೇಟೆಯ ಮೇನ್‌ ಬಜಾರ್‌ ಮೂಲಕ ಹಾದು ಹೋದರು   

ಹೊಸಪೇಟೆ: ನಗರ ಸೇರಿದಂತೆ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಬುಧವಾರ ಮಧ್ಯಾಹ್ನ ಬಿರುಸಿನ ಮಳೆಯಾಯಿತು.

ಬೆಳಿಗ್ಗೆಯಿಂದ ದಟ್ಟ ಕಾರ್ಮೋಡ ಆವರಿಸಿಕೊಂಡಿತ್ತು. ಮಧ್ಯಾಹ್ನ ಏಕಾಏಕಿ ಬಿರುಸಿನ ಮಳೆ ಸುರಿಯಿತು. ಜೋರಾಗಿ ಮಳೆ ಸುರಿದ ಕಾರಣ ದೈನಂದಿನ ಕೆಲಸಕ್ಕೆ ಹೋಗುವವರು ರಸ್ತೆಬದಿಯ ಮಳಿಗೆಗಳಲ್ಲಿ ಕಾದು ನಿಲ್ಲಬೇಕಾಯಿತು. ಕೆಲಸಮಯ ವಾಹನ ಹಾಗೂ ಜನ ಸಂಚಾರ ನಿಂತು ಹೋಗಿತ್ತು.

ತಾಲ್ಲೂಕಿನ ಹೊಸೂರು, ನಾಗೇನಹಳ್ಳಿ, ಬಸವನದುರ್ಗ, ಧರ್ಮದಗುಡ್ಡ, ವ್ಯಾಸನಕೆರೆ, ಸಂಕ್ಲಾಪುರ, ವಡ್ಡರಹಳ್ಳಿ, ಸೀತಾರಾಮ ತಾಂಡಾ, ಕೊಂಡನಾಯಕನಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.