ADVERTISEMENT

ಗುಡುಗು ಸಹಿತ ಬಿರುಸಿನ ಮಳೆ

​ಪ್ರಜಾವಾಣಿ ವಾರ್ತೆ
Published 12 ಮೇ 2021, 5:18 IST
Last Updated 12 ಮೇ 2021, 5:18 IST
ಹೊಸಪೇಟೆಯಲ್ಲಿ ಮಂಗಳವಾರ ರಾತ್ರಿ ಸುರಿದ ಬಿರುಸಿನ ಮಳೆಯಿಂದ ರಾಮ ಟಾಕೀಸ್‌ ವೃತ್ತದಲ್ಲಿ ಅಪಾರ ನೀರು ಸಂಗ್ರಹಗೊಂಡಿತು. ಅದರಲ್ಲೇ ಬೈಕ್‌ ಸವಾರರೊಬ್ಬರು ತೆರಳಿದರು
ಹೊಸಪೇಟೆಯಲ್ಲಿ ಮಂಗಳವಾರ ರಾತ್ರಿ ಸುರಿದ ಬಿರುಸಿನ ಮಳೆಯಿಂದ ರಾಮ ಟಾಕೀಸ್‌ ವೃತ್ತದಲ್ಲಿ ಅಪಾರ ನೀರು ಸಂಗ್ರಹಗೊಂಡಿತು. ಅದರಲ್ಲೇ ಬೈಕ್‌ ಸವಾರರೊಬ್ಬರು ತೆರಳಿದರು   

ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ಹಲವು ಭಾಗಗಳಲ್ಲಿ ಮಂಗಳವಾರ ರಾತ್ರಿ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ.

ರಾತ್ರಿ 9.15ರ ಸುಮಾರಿಗೆ ಆರಂಭವಾದ ಮಳೆ ಸತತವಾಗಿ ಒಂದು ಗಂಟೆಗೂ ಅಧಿಕ ಸಮಯ ಸುರಿಯಿತು. ಬಿರುಗಾಳಿಯೊಂದಿಗೆ ಆರಂಭಗೊಂಡ ಮಳೆ, ಬಳಿಕ ಗುಡುಗು, ಮಿಂಚಿನೊಂದಿಗೆ ಬಿರುಸಾಗಿ ಸುರಿಯಿತು. ಜೋರು ಮಳೆಯಿಂದ ನಗರದ ರಾಮ ಟಾಕೀಸ್‌, ಮೇನ್‌ ಬಜಾರ್‌, ಪುಣ್ಯಮೂರ್ತಿ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನೀರು ಸಂಗ್ರಹಗೊಂಡಿತು.

ಸೋಮವಾರ ಸಂಜೆ ಸಹ ಮಳೆ ಸುರಿದಿತ್ತು. ಎರಡನೇ ದಿನವೂ ಮಳೆ ಸುರಿದ ಕಾರಣ ತಾಪಮಾನದಲ್ಲಿ ಭಾರಿ ಇಳಿಕೆಯಾಗಿದ್ದು, ವಾತಾವರಣ ತಂಪಾಗಿದೆ. ತಾಲ್ಲೂಕಿನ ಹಂಪಿ, ಕಮಲಾಪುರ, ಬುಕ್ಕಸಾಗರ, ನಲ್ಲಾಪುರ, ಸೀತಾರಾಮ ತಾಂಡ, ಚಿನ್ನಾಪುರ, ಇಂಗಳಗಿ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.