ವಿಜಯನಗರ (ಹೊಸಪೇಟೆ): ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಗುರುವಾರ ಸಂಜೆ ತುಂತುರು ಮಳೆಯಾಯಿತು.
ಕಳೆದ ಕೆಲವು ದಿನಗಳಿಂದ ಮಧ್ಯಾಹ್ನ ವಿಪರೀತ ಬಿಸಿಲು ಇರುತ್ತಿರುವುದರಿಂದ ಸೆಕೆ ಆರಂಭವಾಗಿದೆ. ಆದರೆ, ಗುರುವಾರ ದಿನವಿಡೀ ಮೋಡ ಮುಚ್ಚಿದ ವಾತಾವರಣ ಇತ್ತು. ಸೂರ್ಯ ಆಗಾಗ ಕಣ್ಣಾಮುಚ್ಚಾಲೆ ಆಡುತ್ತಿದ್ದ. ತಂಗಾಳಿ ಬೀಸಿದ್ದರಿಂದ ವಾತಾವರಣ ಸಂಪೂರ್ಣ ತಂಪಾಗಿತ್ತು. ಸಂಜೆ ವೇಳೆ ತುಂತುರು ಮಳೆಯಿಂದ ವಾತಾವರಣ ಮತ್ತಷ್ಟು ತಂಪಾಗಿತ್ತು.
ತಾಲ್ಲೂಕಿನ ಹೊಸೂರು, ಧರ್ಮದಗುಡ್ಡ, ಇಪ್ಪಿತ್ತೇರಿ ಮಾಗಾಣಿ, ಹಂಪಿ, ಕಮಲಾಪುರ, ಕಡ್ಡಿರಾಂಪುರ, ವ್ಯಾಸನಕೆರೆ ಸೇರಿದಂತೆ ಹಲವೆಡೆ ತುಂತುರು ಮಳೆಯಾಗಿರುವುದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.