ಹೊಸಪೇಟೆ: ತಾಲ್ಲೂಕಿನಗೊಲ್ಲರಹಳ್ಳಿಯಲ್ಲಿ ಬುಧವಾರ ಆಲಿಕಲ್ಲು ಸಹಿತ ಬಿರುಸಿನ ಮಳೆಯಾಯಿತು.
ಗುಡುಗು ಸಹಿತ ಸುರಿದ ಆಲಿಕಲ್ಲು ಮಳೆಯಿಂದ ವಾತಾವರಣ ಸಂಪೂರ್ಣ ತಂಪಾಗಿತ್ತು. ಆಲಿಕಲ್ಲು ಬೀಳುತ್ತಿದ್ದಂತೆ ಜನ ಕಟ್ಟಡ, ಮಳಿಗೆಗಳ ಆಶ್ರಯ ಪಡೆದರು. ಚಿಣ್ಣರು ಆಲಿಕಲ್ಲು ಮಳೆ ನೋಡಿ ಸಂಭ್ರಮಿಸಿದರು.
ಜಿ. ನಾಗಲಾಪುರ, ಗರಗದಲ್ಲೂ ಕೆಲ ನಿಮಿಷ ಮಳೆಯಾಗಿದೆ. ನಗರದಲ್ಲಿ ದಟ್ಟ ಕಾರ್ಮೋಡ ಆವರಿಸಿಕೊಂಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.